ಶತಮಾನಗಳೇನು ಸಹಸ್ರಮಾನಗಳಿಗೂ ಹಳೆಯದು
ಬೆಳಕಿನಕಕ್ಷೆಗೆ ಬಂದವರನು ತೋಳತೆಕ್ಕೆಗೆ ತೆಗೆದು
ಜಗಮಗಿಸುತ್ತಿದೆ. ಧೂಳು ಅಡರಿದೆ ಕಿಟ್ಟಮುಸುಗಿದೆ
ಎಣ್ಣೆತೀರಿದೆಯಾದರೂ ಬಿರುಗಾಳಿಗೂ ಜಗ್ಗದಹಣತೆ
ಇಂದಿನವರೆಗೂ ಉರಿಯುತ್ತಿದೆ
Sunday, June 1, 2008
ಬೆನ್ ಯಹೂದ
ಬೆನ್ ಯಹೂದ ಕೊಟ್ಟಕರೆಗೆ ಜಗತ್ತಿನ ಮೂಲೆಮೂಲೆಗಳಲ್ಲಿ ಪ್ರತಿಧ್ವನಿ ,
ಇಸ್ರೇಲಿನ ಹಕ್ಕಿ ಮರಳಿತು ಗೂಡಿನೆಡೆಗೆ
ಹಳೆಯಹಾಡಿಗೆ ಹೊಸರಾಗ ಮೂಡಿತ್ತು ಚಿಂದಿಗಳಲ್ಲಿ ನಿಘಂಟು
ಅರಬರ ಕಪಿಮುಷ್ಟಿಯಲ್ಲಿ ನಲುಗಿದ್ದಕ್ಕಿಂತ ಸಂಪ್ರದಾಯದ ಬೇಗೆಯಲಿ ನವೆದಿತ್ತು ಜೀವ
ಆಸೆಚಿಗುರಿತು ಬೀಜಬಲಿಯಿತು ಚಿಂತನೆಗೆ ಗರಿಮೂಡಿತ್ತು ಡೀರ್ ನೊಂದಿಗೆ
ನೈರಾಶ್ಯದ ಚಂಡಮಾರುತದಲ್ಲೂ ಆಶಾದೀಪ ತೇಲಿಬಂದಿತ್ತು
ಸಾಗರದ ತೀರಕ್ಕೆ . ಜಗದ ಜನಮಾನಸ ಎಲ್ಲಿದ್ದರೂ ಒಂದೇ ....
ದೇಶ ಭಾಷೆಗೆಂದು ದುಡಿದ ಜೀವಿಗಳ ಜೀವಿತವೇ ಪ್ರಶ್ನೆಯಾದಾಗ ಜೀವಮುದುಡಿ
ದೀಪ ಆರುತ್ತದೆಯಾದರೂ ಪ್ರಯತ್ನ ಹುಸಿಯಾಗಲಿಲ್ಲ ಮತ್ತೆಹೊತ್ತಿತ್ತು ಹೀಬ್ರೂಹಣತೆ.
ಇಸ್ರೇಲಿನ ಹಕ್ಕಿ ಮರಳಿತು ಗೂಡಿನೆಡೆಗೆ
ಹಳೆಯಹಾಡಿಗೆ ಹೊಸರಾಗ ಮೂಡಿತ್ತು ಚಿಂದಿಗಳಲ್ಲಿ ನಿಘಂಟು
ಅರಬರ ಕಪಿಮುಷ್ಟಿಯಲ್ಲಿ ನಲುಗಿದ್ದಕ್ಕಿಂತ ಸಂಪ್ರದಾಯದ ಬೇಗೆಯಲಿ ನವೆದಿತ್ತು ಜೀವ
ಆಸೆಚಿಗುರಿತು ಬೀಜಬಲಿಯಿತು ಚಿಂತನೆಗೆ ಗರಿಮೂಡಿತ್ತು ಡೀರ್ ನೊಂದಿಗೆ
ನೈರಾಶ್ಯದ ಚಂಡಮಾರುತದಲ್ಲೂ ಆಶಾದೀಪ ತೇಲಿಬಂದಿತ್ತು
ಸಾಗರದ ತೀರಕ್ಕೆ . ಜಗದ ಜನಮಾನಸ ಎಲ್ಲಿದ್ದರೂ ಒಂದೇ ....
ದೇಶ ಭಾಷೆಗೆಂದು ದುಡಿದ ಜೀವಿಗಳ ಜೀವಿತವೇ ಪ್ರಶ್ನೆಯಾದಾಗ ಜೀವಮುದುಡಿ
ದೀಪ ಆರುತ್ತದೆಯಾದರೂ ಪ್ರಯತ್ನ ಹುಸಿಯಾಗಲಿಲ್ಲ ಮತ್ತೆಹೊತ್ತಿತ್ತು ಹೀಬ್ರೂಹಣತೆ.
ಕಾಲ
ಅಂದು ಬೆಳ್ಳಂ ಬೆಳಗ್ಗೆ ವಾಯುವಿಹಾರ ಮಸಣದ ಹತ್ತಿರ
ಯಾರೋ ಮಿಸುಕಾಡಿದಂತೆ ಮೈಯೆಲ್ಲಾ
ಜುಂ ಎಂದಿತು ಒಂದು ಕ್ಷಣ !
ಸಮಾಧಿಯಿಂದ ಎದ್ದುಬಂದ ಶುಭ್ರವೇಷಧಾರಿ
ಅವನಿಗೊಂದೇ ಕುತೂಹಲ ಇದು ಯಾವಕಾಲ ? ಯಾರಕಾಲ ?
ನನ್ನ ಉತ್ತರ ಸದಾ ಸಿದ್ಧ ಎರಡುಸಾವಿರದ ಐದು ಗತಕಲಿ
ಆದರೆ ಕಾಲ ಉಳ್ಳವನದು. ಕೇಳಿದನವ ಅಚ್ಚರಿಯಲಿ ಓಹೋ !
ಮತ್ತೆ ಪ್ರಶ್ನೆ ಅಂದಿನ ಹೋರಾಟದಲಿ ಗೆದ್ದವರಾರು ,
ಯಾವ ಹೋರಾಟ ? ಬಿಡಿಸಿಹೇಳು ಎಂದೆ
ತುಂಡು ಪಂಚೆಯ ಫಕೀರ ಬಿಳೀ ತೊಗಲಿನವರೊಡನೆ ಹೂಡಿದ ಸಮರ
ಗೆಲುವು ನಮ್ಮದೆ ಆದರೂ ಅಂದಿನಿಂದ ಇಂದಿನತನಕ ಸೋಲೇ ಕಾಡುತ್ತಿದೆ
ವೇಷ , ಭಾಷೆ , ಸಂಸ್ಕೃತಿಗಳ ಅನುಕರಣೆಯಲ್ಲಿ ಅನುಸರಣೆಯಲ್ಲಿ
ನಮ್ಮ ನಾವೇ ಮರೆತು ಮತ್ತೆಗುಲಾಮರಾಗಿದ್ದೇವೆ .. ... .. ಮಾತು ಮುಗಿಯುವಮುನ್ನ
ಮತ್ತೇನೋ ಮಿಸುಕಾಡಿತು , ನೋಡಲು ಬೂಟುಕಾಲ ಸಿಪಾಯಿ
ಬಂದವನೇ ನಿನ್ನ ಮಾತು ಮುಗಿಯಿತೆ ಎಂದನಷ್ಟೇ
ಅತ್ತ ತಿರುಗಿ ಅಣ್ಣ ನಮ್ಮ ಕಾಲವೇ ಚೆನ್ನ !
ನಿನ್ನದಕ್ಕೆ ನೀನು ನನ್ನದಕ್ಕೆ ನಾನು ನಿಷ್ಠೆ ತೋರಿ ಪ್ರಾಣ ಬಿಟ್ಟೆವು.
ಇಂದಿನವರಿಗೆ ಅದರ ಗಂಧ ತಿಳಿಯದು . ನಡಿ ನಡಿ ಹೊತ್ತಾಯಿತು !!
ನೆಸರವದೋ ಮೂಡಿತು . ನಾನೂ ಹೊರಟೆ ಮನೆಯೆಡೆಗೆ ,
ಅವರು ಸಮಾಧಿಯೆಡೆಗೆ ನೆಲದ ದುಸ್ಥಿತಿಗೆ ಮರುಗುತ .
ಯಾರೋ ಮಿಸುಕಾಡಿದಂತೆ ಮೈಯೆಲ್ಲಾ
ಜುಂ ಎಂದಿತು ಒಂದು ಕ್ಷಣ !
ಸಮಾಧಿಯಿಂದ ಎದ್ದುಬಂದ ಶುಭ್ರವೇಷಧಾರಿ
ಅವನಿಗೊಂದೇ ಕುತೂಹಲ ಇದು ಯಾವಕಾಲ ? ಯಾರಕಾಲ ?
ನನ್ನ ಉತ್ತರ ಸದಾ ಸಿದ್ಧ ಎರಡುಸಾವಿರದ ಐದು ಗತಕಲಿ
ಆದರೆ ಕಾಲ ಉಳ್ಳವನದು. ಕೇಳಿದನವ ಅಚ್ಚರಿಯಲಿ ಓಹೋ !
ಮತ್ತೆ ಪ್ರಶ್ನೆ ಅಂದಿನ ಹೋರಾಟದಲಿ ಗೆದ್ದವರಾರು ,
ಯಾವ ಹೋರಾಟ ? ಬಿಡಿಸಿಹೇಳು ಎಂದೆ
ತುಂಡು ಪಂಚೆಯ ಫಕೀರ ಬಿಳೀ ತೊಗಲಿನವರೊಡನೆ ಹೂಡಿದ ಸಮರ
ಗೆಲುವು ನಮ್ಮದೆ ಆದರೂ ಅಂದಿನಿಂದ ಇಂದಿನತನಕ ಸೋಲೇ ಕಾಡುತ್ತಿದೆ
ವೇಷ , ಭಾಷೆ , ಸಂಸ್ಕೃತಿಗಳ ಅನುಕರಣೆಯಲ್ಲಿ ಅನುಸರಣೆಯಲ್ಲಿ
ನಮ್ಮ ನಾವೇ ಮರೆತು ಮತ್ತೆಗುಲಾಮರಾಗಿದ್ದೇವೆ .. ... .. ಮಾತು ಮುಗಿಯುವಮುನ್ನ
ಮತ್ತೇನೋ ಮಿಸುಕಾಡಿತು , ನೋಡಲು ಬೂಟುಕಾಲ ಸಿಪಾಯಿ
ಬಂದವನೇ ನಿನ್ನ ಮಾತು ಮುಗಿಯಿತೆ ಎಂದನಷ್ಟೇ
ಅತ್ತ ತಿರುಗಿ ಅಣ್ಣ ನಮ್ಮ ಕಾಲವೇ ಚೆನ್ನ !
ನಿನ್ನದಕ್ಕೆ ನೀನು ನನ್ನದಕ್ಕೆ ನಾನು ನಿಷ್ಠೆ ತೋರಿ ಪ್ರಾಣ ಬಿಟ್ಟೆವು.
ಇಂದಿನವರಿಗೆ ಅದರ ಗಂಧ ತಿಳಿಯದು . ನಡಿ ನಡಿ ಹೊತ್ತಾಯಿತು !!
ನೆಸರವದೋ ಮೂಡಿತು . ನಾನೂ ಹೊರಟೆ ಮನೆಯೆಡೆಗೆ ,
ಅವರು ಸಮಾಧಿಯೆಡೆಗೆ ನೆಲದ ದುಸ್ಥಿತಿಗೆ ಮರುಗುತ .
Subscribe to:
Posts (Atom)